ಸುರಕ್ಷತಾ ಸಾಧನಗಳಿಲ್ಲದ ಕಾರಣ ಮುಂಬೈ, ದಿಲ್ಲಿಯಲ್ಲಿ ಕೇರಳದ ನರ್ಸ್‌ಗಳಿಗೆ ಕೊರೋನ

Update: 2020-04-07 17:51 GMT

ತಿರುವನಂತಪುರಂ, ಎ.7: ಮುಂಬೈ ಮತ್ತು ಹೊಸದಿಲ್ಲಿಯಲ್ಲಿ ಕೇರಳದ ನರ್ಸ್‌ಗಳನ್ನು ಯಾವುದೇ ಸುರಕ್ಷಾ ಸಾಧನಗಳಿಲ್ಲದೆ ಕರ್ತವ್ಯ ನಿರ್ವಹಿಸಲು ಬಲವಂತಪಡಿಸಿದ ಕಾರಣ ಅವರಿಗೆ ಕೊರೋನ ಸೋಂಕು ತಗುಲಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ತಕ್ಷಣ ಮಧ್ಯಪ್ರವೇಶಿಸಿ, ಆರೋಗ್ಯ ಕಾರ್ಯಕರ್ತರಿಗೆ ಗರಿಷ್ಟ ಸುರಕ್ಷಾ ಸಾಧನ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ರಾಜ್ಯಗಳಿಗೆ ಸೂಚಿಸುವಂತೆ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News