ಕಲಬುರ್ಗಿ: ರೈತ ಆತ್ಮಹತ್ಯೆ

Update: 2020-04-07 17:58 GMT

ಕಲಬುರ್ಗಿ, ಎ.7: ಲಾಕ್‍ಡೌನ್ ನಡುವೆ ಪಡೆದ ಸಾಲವನ್ನು ಮರುಪಾವತಿ ಮಾಡಲಾಗದೆ ನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಮಲ್ಲಾಬಾದ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಗ್ರಾಮದ ಕಾಳಪ್ಪ ಕಂಬಾರ(62) ಆತ್ಮಹತ್ಯೆಗೈದವರು ಎಂದು ತಿಳಿದುಬಂದಿದೆ.

ಬ್ಯಾಂಕ್ ಮತ್ತು ಖಾಸಗಿಯಾಗಿ 5 ಲಕ್ಷ ರೂ.  ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಘಟನೆ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News