ಮತಾಂಧರ ಸಮರ್ಥಿಸುವ ರಾಜಕೀಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು: ಯತ್ನಾಳ್
Update: 2020-04-08 14:22 GMT
ಬೆಂಗಳೂರು, ಎ. 8: `ಕಾನೂನು ಕ್ರಮದ ಎಚ್ಚರಿಕೆ ಕೊಡಬೇಕಾದುದ್ದು ಕೊರೋನ ವೈರಸ್ ಸೋಂಕು ಹಬ್ಬಿಸುವ ಮತಾಂಧರಿಗೆ, ಅವರನ್ನು ಸಮರ್ಥಿಸುವ ಮಾನವೀಯತೆ ಇಲ್ಲದ ಧಾರ್ಮಿಕ, ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, `ದಿಲ್ಲಿಯ ತಬ್ಲೀಗಿ ಜಮಾತ್ ಜಿಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ' ಎಂದು ತಮ್ಮದೇ ದಾಟಿಯಲ್ಲಿ ಒಂದು ಸಮುದಾಯದ ವಿರುದ್ಧ ಟೀಕೆ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.