ಮತಾಂಧರ ಸಮರ್ಥಿಸುವ ರಾಜಕೀಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು: ಯತ್ನಾಳ್

Update: 2020-04-08 14:22 GMT

ಬೆಂಗಳೂರು, ಎ. 8: `ಕಾನೂನು ಕ್ರಮದ ಎಚ್ಚರಿಕೆ ಕೊಡಬೇಕಾದುದ್ದು ಕೊರೋನ ವೈರಸ್ ಸೋಂಕು ಹಬ್ಬಿಸುವ ಮತಾಂಧರಿಗೆ, ಅವರನ್ನು ಸಮರ್ಥಿಸುವ ಮಾನವೀಯತೆ ಇಲ್ಲದ ಧಾರ್ಮಿಕ, ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, `ದಿಲ್ಲಿಯ ತಬ್ಲೀಗಿ ಜಮಾತ್ ಜಿಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ' ಎಂದು ತಮ್ಮದೇ ದಾಟಿಯಲ್ಲಿ ಒಂದು ಸಮುದಾಯದ ವಿರುದ್ಧ ಟೀಕೆ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News