ಪಾನೀರ್ ಚರ್ಚ್ ವ್ಯಾಪ್ತಿಯಲ್ಲಿ ಕಿಟ್ ವಿತರಣೆ

Update: 2020-04-09 16:33 GMT

ಮಂಗಳೂರು, ಎ. 9: ದೇರಳಕಟ್ಟೆಯ ಸಮೀಪದ ಪಾನೀರ್ ಮೆರ್ಸಿಯಮ್ಮ ಚಚ್ ಅಧೀನದಲ್ಲಿರುವ ಅರ್ಹ ಕುಟುಂಬಗಳಿಗೆ ದಾನಿಗಳ ನೆರವಿನಿಂದ ಗುರುವಾರ ಆಹಾರದ ಕಿಟ್ ವಿತರಿಸಲಾಯಿತು. ಅಲ್ಲದೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಸ್ಕ್ ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಶಾಸಕರ ವತಿಯಿಂದ 17 ಸಾವಿರ ಕುಟುಂಬಗಳಿಗೆ ಪಡಿತರ ವ್ಯವಸ್ಥೆ ವಿತರಿಸಲಾಗಿದೆ. ಅದರಂತೆ ಪಾನೀರ್ ಚರ್ಚ್ ಯೋಜನೆಗೂ ಸಹಕಾರ ನೀಡಿದ್ದಾರೆ. ಲಾಕ್‌ಡೌನ್‌ನಿಂದಾಗಿ ಜನರು ಕಷ್ಟದಲ್ಲಿದ್ದರೂ ಕೊರೋನ ದಿಂದ ಮುಕ್ತರಾಗುವ ನಿಟ್ಟಿನಲ್ಲಿ ಮನೆಯಲ್ಲೇ ಇರಲು ಸಲಹೆ ನೀಡಿದರು.

ಚರ್ಚ್‌ನ ಧರ್ಮಗುರು ಫಾ.ಡೆನ್ನಿಸ್ ಸುವಾರಿಸ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷೆ ಸರಿತಾ ಡಿಸೋಜ, ಅರ್ಸುಲೈನ್ ಧರ್ಮಸಭೆಯ ಭಗಿನಿಯರಾದ ಸಿಸ್ಟರ್ ಮಿಲ್ಲಿ ಫೆರ್ನಾಂಡಿಸ್, ಲೀಡಿಯಾ ಸೆರವೋ, ಪ್ರಮೀಳಾ ಡಿಕುನ್ಹಾ, ಮಾಜಿ ಉಪಾಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹಾ ಹಾಗೂ ಪಾಲನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಚರ್ಚ್ ಕಾರ್ಯದರ್ಶಿ ಗ್ರೆಟ್ಟಾ ಡಿಕುನ್ನಾ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News