ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಗೆ ಕಾರಣ ತಿಳಿಸಿದ ಸಚಿವ ಡಾ.ಸುಧಾಕರ್

Update: 2020-04-09 16:58 GMT

ಬೆಂಗಳೂರು, ಎ.9: ತ್ರಿ ಟಿ ಕಾರ್ಯತಂತ್ರ ಹಾಗೂ ವೈದ್ಯರ ಪರಿಶ್ರಮದಿಂದ ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದ್ದು, ದೇಶದಲ್ಲಿಯೇ 13ನೇ ಸ್ಥಾನದಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‍ಮೆಂಟ್ ಎಂಬ ಮೂರು ವಿಧಾನಗಳನ್ನು ಅನುಸರಿಸುತ್ತಿರುವ ಸಾವಿರಾರು ಮಂದಿ ವೈದ್ಯರ ಕಠಿಣ ಪರಿಶ್ರಮ ಹಾಗೂ ನಿಖರವಾದ ಯೋಜನೆಯಿಂದ ಇದು ಸಾಧ್ಯವಾಗುತ್ತಿದೆ. ಇದರಿಂದಾಗಿ ಕೋವಿಡ್-19 ನಿಯಂತ್ರಣದಲ್ಲಿಡಲು ಸಹಾಯ ಮಾಡಲಿದೆ. ಇದು ದೇಶದಲ್ಲಿಯೇ ಕರ್ನಾಟಕ 13ನೇ ಸ್ಥಾನದಲ್ಲಿರಲು ಸಾಧ್ಯವಾಗಿಸಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News