×
Ad

ಕ್ವಾರಂಟೈನ್ ನಿಯಮಗಳ ಪಾಲನೆ ಕುರಿತು ಪರಿಶೀಲನೆ: ಮಹೇಶ್ವರ ರಾವ್

Update: 2020-04-12 19:43 IST

ಉಡುಪಿ, ಎ.12: ಜಿಲ್ಲೆಯಲ್ಲಿ ಕೋರೋನಾ ಸಂಬಂಧಿಸಿದಂತೆ, ಹೋಮ್ ಕ್ವಾರಂಟೈನ್ ಮತ್ತು ಆಸ್ಪತ್ರೆ ಕ್ವಾರಂಟೈನ್‌ನಲ್ಲಿರುವವರು ಸರಕಾರದ ಮಾರ್ಗ ಸೂಚಿ ಅನ್ವಯ ನಿಯಮಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ತಿಳಿಸಿದ್ದಾರೆ.

ಉಡುಪಿ ಜಿಪಂ ಸಭಾಂಗಣದಲ್ಲಿ ರವಿವಾರ ನಡೆದ ಜಿಲ್ಲೆಯಲ್ಲಿನ ಕೊರೋನಾ ನಿಂತ್ರಣ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕ್ವಾರಂಟೈನ್ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲಿಸುತ್ತಿ ರುವ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ಜಿಲ್ಲೆಯ ಗಡಿ ಪ್ರದೇಶ ಗಳನ್ನು ಬಿಗಿಗೊಳಿಸಬೇಕು. ಸರಕು ಸಾಗಣೆ ಮತ್ತು ತುರ್ತು ವೈದ್ಯಕೀಯ ನೆರವು ಅಗತ್ಯವಿರುವವರಿಗೆ ಮಾತ್ರ ಜಿಲ್ಲೆಯೊಳಗೆ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಅವರು ಸೂಚಿಸಿದರು.

ಜಿಲ್ಲೆಯ ಕೊರೋನ ಶಂಕಿತ ಮಾದರಿಗಳನ್ನು ಪ್ರಸ್ತುತ ಮಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದ್ದು, ಇಲ್ಲಿಂದ ವರದಿ ಬರಲು ತಡವಾಗುತ್ತಿದೆ. ಈ ಹಿಂದಿನಂತೆ ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲು ಅಗತ್ಯ ಅನುಮತಿ ನೀಡಬೇಕು ಹಾಗೂ ಕೆಎಂಸಿಯಲ್ಲಿ ಪ್ರಯೋಗಾ ಲಯಕ್ಕೆ ಅನುಮತಿ ದೊರಕಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದರು. ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಕಾರ್ಯದರ್ಶಿ ಇದೇ ವೇಳೆ ತಿಳಿಸಿದರು.

ಕಂಟೈನ್‌ಮೆಂಟ್ ಯೋಜನೆ ಕುರಿತು ಎಲ್ಲಾ ಸಿಬ್ಬಂದಿಗಳಿಗೆ ತರಬೇತಿ ನೀಡ ಬೇಕು. ಅಗತ್ಯವಿರುವ ಸಿಬ್ಬಂದಿ ಹಾಗೂ ಇತರೆ ವ್ಯವಸ್ಥೆಯನ್ನು ಸಿದ್ದಪಡಿಸಿ ಕೊಂಡಿರಬೇಕು. ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ತಮ್ಮನ್ನು ಸಂಪರ್ಕಿಸ ಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲಾ ತಹಶೀಲ್ದಾರ್ ಮತ್ತು ತಾಪಂ ಕಾರ್ುನಿರ್ವಹಣಾಧಿಕಾರಿಗಳು ಹಾಜರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News