ಪಡುಬಿದ್ರೆ : ಕ್ಷುಲ್ಲಕ ಕಾರಣಕ್ಕೆ ಬಾಲಕಿ ಆತ್ಮಹತ್ಯೆ

Update: 2020-04-13 17:38 GMT

ಪಡುಬಿದ್ರೆ : ಮೊಬೈಲ್ ನೋಡುತಿದ್ದ ಬಾಲಕಿಗೆ ಪೋಷಕರು ಆಕ್ಷೇಪಿಸಿರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಅದಮಾರು ನಿವಾಸಿ ಸುಜನ್ಯಾ (13) ಎಂದು ಗುರುತಿಸಲಾಗಿದೆ.

ಸಂಜೆ ಮೊಬೈಲ್ ವೀಕ್ಷಿಸುತಿದ್ದ ಈಕೆಗೆ ಬುದ್ಧಿವಾದ ಹೇಳಿದ್ದರು.  ಇದರಿಂದ ನೊಂದ ಆಕೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನ ನಡೆಸಿದ್ದಳು. ಜೀವಣ್ಮರನ ಸ್ಥಿತಿಯಲ್ಲಿದ್ದ ಆಕೆಯನ್ನು ಮನೆಯವರು ಕೂಡಲೇ ಪಡುಬಿದ್ರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಉಡುಪಿಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈ ವೇಳೆ ಆಕೆ ಮೃತಪಟ್ಟಿರುವುದು ವೈದ್ಯರು ದೃಢಪಡಿಸಿದರು.

ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪಡುಬಿದ್ರಿಯ ಖಾಸಗಿ  ಶಾಲೆಯ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಕಬ್ಬಡ್ಡಿಯಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯದಲ್ಲಿ ರಾಜ್ಯದಿಂದ ಪ್ರತಿನಿಧಿಸಿದ್ದಳು. ಈಕೆಯ ತಂದೆ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯರಾಗಿದ್ದು, ತಾಯಿ ಬೇರೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News