ರಾಜ್ಯದಲ್ಲಿ ಕೊರೋನಗೆ ಎಂಟನೇ ಬಲಿ
ಬೆಂಗಳೂರು, ಎ.14: ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಸೋಮವಾರ ರಾತ್ರಿ ನಗರದ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೋನ ಸೋಂಕು ಬಾಧಿಸಿರುವುದು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 8ಕ್ಕೇರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ರವಿವಾರ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಗೆ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಅವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಅವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ಕಲಬುರಗಿಯಲ್ಲಿ ಕೊರೋನ ಸೋಂಕಿಗೆ ಒಳಗಾಗಿ ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರೂ ಮೃತಪಟ್ಟಿದ್ದರು.
ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, #Covid19 ಪರೀಕ್ಷೆ ಮಾಡಲಾಗಿ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.
— B Sriramulu (@sriramulubjp) April 13, 2020