ಸುರತ್ಕಲ್: ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ಸಾವು

Update: 2020-04-14 18:21 GMT

ಮಂಗಳೂರು, ಎ.14: ಕಳೆದ ಎರಡು ದಿನಗಳಿಂದ ಮಲಬದ್ಧತೆ ಮತ್ತು ಹೊಟ್ಟೆನೋವಿನಿಂದ ಬಳಲುತ್ತಿದ್ದ ಸುರತ್ಕಲ್ ಸಮೀಪದ ಇಡ್ಯದ ಯುವಕನೊಬ್ಬ ಇಂದು ಮೃತಪಟ್ಟಿದ್ದಾನೆ.

ಇಡ್ಯ‌ ನಿವಾಸಿ 28 ವರ್ಷದ ಯುವಕ ಮೃತಪಟ್ಟಿದ್ದು, ಈತನಿಗೆ ‌ಕಳೆದ ಎರಡು ದಿನಗಳ ಹಿಂದೆ ಮಲಬದ್ಧತೆ ಮತ್ತು ಹೊಟ್ಟೆನೋವು ಕಾಣಿಸಿತ್ತು ಎನ್ನಲಾಗಿದೆ. ಅದಕ್ಕಾಗಿ ಸುರತ್ಕಲ್‌ನಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದ ಎಂದು ತಿಳಿದು ಬಂದಿದೆ. ಮಂಗಳವಾರ ತೀವ್ರ ಹೊಟ್ಟೆನೋವು ‌ಕಾಣಿಸಿಕೊಂಡಿದ್ದರಿಂದ ಯುವಕನನ್ನು ನಗರದ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿದ್ದು, ಆದರೆ ಆಸ್ಪತ್ರೆಗೆ ಸೇರುವ ಮುನ್ನವೇ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಆದರೆ, ಎಲ್ಲೆಡೆ ಕೊರೋನ ವೈರಸ್ ಹರಡುತ್ತಿರುವ ಸಂದರ್ಭದಲ್ಲೇ ಯುವಕ ಮೃತಪಟ್ಟಿದ್ದರಿಂದ ಜಿಲ್ಲಾಡಳಿತದ ಸೂಚನೆಯಂತೆ ಖಾಸಗಿ ಆಸ್ಪತ್ರೆಯವರು ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಗಂಟಲಿನ ದ್ರವ ಪರೀಕ್ಷೆಗೆ ಮುಂದಾಗಿದ್ದಾರೆ. ಹೀಗಾಗಿ ಮೃತದೇಹವನ್ನು ವಾರಸುದಾರರಿಗೆ ಬಿಟ್ಟುಕೊಡಲು ಸ್ವಲ್ಪ ವಿಳಂಬವಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News