ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಮೇ 3ರವರೆಗೆ ಸೆಕ್ಷನ್ 144: ಜಿಲ್ಲಾಧಿಕಾರಿ ಆರ್ ಲತಾ

Update: 2020-04-15 16:35 GMT

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊವಿಡ್-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144 ರನ್ವಯ ಜಿಲ್ಲಾದ್ಯಂತ ನಿಷೇದಾಜ್ಞೆಯನ್ನು ಮೇ 03 ರವರೆಗೆ ವಿಸ್ತರಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿ ಆರ್.ಲತಾ ರವರು ತಿಳಿಸಿರುತ್ತಾರೆ.

ಕೊವಿಡ್-19 (ಕೊರೊನಾ ವೈರಾಣು ಕಾಯಿಲೆ 2019) ಸೋಂಕು ಹರಡುವುದನ್ನು ತಡಗಟ್ಟಲು ಸಾರ್ವಜನಿಕ ಹಿತದೃಷ್ಠಿಯಿಂದ ಕಠಿಣ ನಿರ್ಧಾರಗಳನ್ನು ಕೈಗೊಂಡು ಕೊರೋನ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕೇಂದ್ರ ಸರ್ಕಾರದ ಆದೇಶದಂತೆ ಎಪ್ರಿಲ್ 14 ರವರೆಗೆ ವಿಧಿಸಲಾಗಿದ್ದ ಲಾಕ್‍ಡೌನ್ ಕ್ರಮವನ್ನು ಮೇ3 ರ ಮಧ್ಯರಾತ್ರಿ 12:00 ಗಂಟೆಯವರೆಗೆ ವಿಸ್ತರಿಸಿ ಆದೇಶ ಹೊರಡಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News