ವಿದೇಶದಲ್ಲಿರುವ ಕನ್ನಡಿಗರನ್ನು ಕರೆತರಲು ಮುಸ್ಲಿಂ ಸೆಂಟ್ರಲ್ ಕಮಿಟಿ ಮನವಿ
Update: 2020-04-16 17:28 GMT
ಮಂಗಳೂರು,ಎ.16: ಕೊರೋನ ಸೋಂಕಿನ ಸಂಕಷ್ಟಕ್ಕೊಳಗಾಗಿ ವಿದೇಶದಲ್ಲಿರುವ ಕನ್ನಡಿಗರನ್ನು ಕರೆತರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮತ್ತು ಸಂಸದ ನಳಿನ್ ಕುಮಾರ್ ಕಟೀಲ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯು ಮನವಿ ಸಲ್ಲಿಸಿದೆ.
ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಸಿ.ಎಂ. ಹನೀಫ್, ಮೊಯಿದಿನ್ ಮೋನು, ಅದ್ದು ಹಾಜಿ, ಡಾ. ಅರೀಫ್ ಮಸೂದ್, ಅಬ್ದುಲ್ ರಝಾಕ್ ಅಮ್ಮೆಮಾರ್, ಪಕೀರಬ್ಬ ಮಾಸ್ಟರ್ ನಿಯೋಗದಲ್ಲಿದ್ದರು.