×
Ad

ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆಗೆ ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡದಂತೆ ಸೂಚನೆ

Update: 2020-04-18 18:26 IST

ಮಂಗಳೂರು, ಎ.18: ವೈದ್ಯರ ಸಲಹಾ ಚೀಟಿ ಇಲ್ಲದೆ ಯಾವುದೇ ಜ್ವರ, ಶೀತ, ನೆಗಡಿ, ಕೆಮ್ಮು ಮತ್ತು ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗಳಿಗೆ ಪ್ಯಾರಾಸಿಟಮಾಲ್ ಇರುವ ಔಷಧಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ ಉಪ ಔಷಧ ನಿಯಂತ್ರಕರು ಔಷಧ ವ್ಯಾಪಾರಸ್ಥರಿಗೆ ಸೂಚಿಸಿದ್ದಾರೆ.

ನೋವೆಲ್ ಕೊರೋನ ಸೋಂಕು ರೋಗ ಪತ್ತೆ ಹಚ್ಚುವಿಕೆ, ರೋಗ ಹರಡುವುದನ್ನು ತಡೆಗಟ್ಟುವುದು ಹಾಗೂ ನಿಯಂತ್ರಣದ ಉದ್ದೇಶದಿಂದ ಈ ಸೂಚನೆ ನೀಡಲಾಗುತ್ತಿದೆ. ವೈದ್ಯರ ಸಲಹಾ ಚೀಟಿ ಮೇರೆಗೆ ವಿತರಿಸಿದ್ದಲ್ಲಿ ವ್ಯಕ್ತಿಯ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವೈದ್ಯರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಪಡೆದು ಮಾರಾಟ ರಶೀದಿಗಲಲ್ಲಿ ನಮೂದಿಸಬೇಕು ಎಂದು ಹೇಳಲಾಗಿದೆ. ತಪ್ಪಿದ್ದಲ್ಲಿ ಔಷಧ ಹಾಗೂ ಕಾಂತಿವರ್ಧಕಗಳ ಅಧಿನಿಯಮ 1940 ಮತ್ತದರ ನಿಯಮಗಳಡಿ ಸೂಕ್ತ ಕ್ರಮ ಜರಗಿಸಲಾಗುವುದು. ಮೇಲೆ ತಿಳಿಸಲಾದ ರೋಗ ಲಕ್ಷಣ ಗಳಿರುವ ವ್ಯಕ್ತಿಗಳು ನೋಂದಾಯಿತ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧ ಖರೀದಿಸಲು ಬಂದಲ್ಲಿ ಈ ಬಗ್ಗೆ ಆರೋಗ್ಯ ಇಲಾಖೆಗೆ ಕಡ್ಡಾಯ ವಾಗಿ ತಿಳಿಸಬೇಕು ಎಂದು ಕೂಡಾ ಔಷಧ ವ್ಯಾಪಾರಸ್ಥರಿಗೆ ಪತ್ರಿಕಾ ಪ್ರಕಟನೆಯ ಮೂಲಕ ನಿರ್ದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News