ನಿಯಮ ಉಲ್ಲಂಘನೆ ಆಗಿಲ್ಲ: ನಿಖಿಲ್ ಕುಮಾರಸ್ವಾಮಿ - ರೇವತಿ ವಿವಾಹದ ಬಗ್ಗೆ ಸಿಎಂ ಬಿಎಸ್‌ವೈ

Update: 2020-04-18 15:04 GMT

ಬೆಂಗಳೂರು, ಎ.18: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪುತ್ರನ ವಿವಾಹ ಸರಳವಾಗಿ ನಡೆಸಿದ್ದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಅವರ ಮಗ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಮದುವೆಯನ್ನು ಸರಳವಾಗಿ ಆಯೋಜನೆ ಮಾಡಿದ್ದಾರೆ ಎಂದರು.

ಸರಕಾರದ ಅನುಮತಿ ಪಡೆದೇ ವಿವಾಹ ಆಯೋಜನೆ‌ ಮಾಡಿದ್ದಾರೆ. ಅವರದ್ದು ದೊಡ್ಡ ಕುಟುಂಬವಾಗಿದ್ದರೂ ಸರಳ ರೀತಿಯಲ್ಲಿ ವಿವಾಹ ನೆರವೇರಿಸಿದ್ದಾರೆ. ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಕೊರೋನ ಸೋಂಕಿನ ಹಿನ್ನಲೆಯಲ್ಲಿ ಹೇರಿರುವ ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡದೆ ಸರಳವಾಗಿ ವಿವಾಹ ನಡೆಸಿದ್ದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News