ಲಾಕ್ ಡೌನ್ ಉಲ್ಲಂಘನೆ: ನಿರೂಪಕ ಅಕುಲ್ ಬಾಲಾಜಿ ವಿರುದ್ಧ ಎಫ್‍ಐಆರ್ ದಾಖಲು

Update: 2020-04-20 14:47 GMT
Photo: Facebook(Akul Balaji)

ಬೆಂಗಳೂರು, ಎ.20: ಲಾಕ್‍ಡೌನ್ ಉಲ್ಲಂಘಿಸಿ ರೆಸಾರ್ಟ್ ವ್ಯಾಪಾರ ನಡೆಸಿದ ಆರೋಪದಡಿ ನಿರೂಪಕ ಅಕುಲ್ ಬಾಲಾಜಿ ವಿರುದ್ಧ ಇಲ್ಲಿನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು ಹೊರವಲಯದ ಲಗುಮೇನಹಳ್ಳಿ ಗ್ರಾಮದಲ್ಲಿ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್‍ನಲ್ಲಿ ಥಣಿಸಂದ್ರದ ನಿವಾಸಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಬಾಡಿಗೆ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸ್ಥಳೀಯರು ನೀಡಿರುವ ದೂರಿನ್ವಯ ಎಫ್‍ಐಆರ್ ದಾಖಲು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರಕಾರದ ಆದೇಶಗಳನ್ನು ಉಲ್ಲಂಘಿಸಿ ರೆಸಾರ್ಟ್ ನಡೆಸಿದ ಅಕುಲ್ ಬಾಲಾಜಿ, ಶ್ರೀನಿವಾಸ್ ಸುಬ್ರಮಣಿ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಡೆ ಕಾಯಿದೆ 188 ಐಪಿಸಿ ಕಲಂ 269ರ ಅನ್ವಯ ಎಫ್‍ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News