ಕೊರೋನ ವೈರಸ್ : ಮಂಜೇಶ್ವರದ ಯುವಕ ದುಬೈಯಲ್ಲಿ ಮೃತ್ಯು

Update: 2020-04-21 13:00 GMT
ಸಾಂದರ್ಭಿಕ ಚಿತ್ರ

ಮಂಜೇಶ್ವರ : ಕೊರೋನ ವೈರಸ್ ಸೋಂಕಿನಿಂದ ವರ್ಕಾಡಿ ನಿವಾಸಿಯೋರ್ವ ದುಬೈಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. 

ಮೃತರನ್ನು ಮಜೀರ್ಪಳ್ಳ ಸಮೀಪದ ನಿವಾಸಿ ಎಂದು ತಿಳಿದುಬಂದಿದೆ.

ಜ್ವರ ಕಾಣಿಸಿಕೊಂಡ ಕಾರಣ ಮಾ. 31 ರಂದು ದುಬೈಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿ ತಪಾಸಣೆ ನಡೆಸಿದಾಗ ಕೋವಿಡ್ 19 ಹಾಗೂ ನ್ಯುಮೋನಿಯಾ ಕಾಣಿಸಿಕೊಂಡಿತ್ತು. ಇದರಿಂದಾಗಿ ಅವರನ್ನು ಆಸ್ಪತ್ರೆಯ ನಿಗಾ ಘಟಕದಲ್ಲಿರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಎರಡೂವರೆ ತಿಂಗಳ ಹಿಂದೆ ದುಬೈಗೆ ಹೋಗಿದ್ದ ಅವರು ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News