ಸಾಹಿತಿ-ಕಲಾವಿದರಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಆಹ್ವಾನ

Update: 2020-04-21 17:39 GMT

ಬೆಂಗಳೂರು, ಎ.21: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‍ಡಾನ್ ಇರುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ  ಕಲಾವಿದರು, ಸಾಹಿತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕ ಸಹಾಯ ಮಾಡಲು ನಿರ್ಧರಿಸಲಾಗಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲ ಕಲಾ ಪ್ರಕಾರದ ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾಪ್ರಕಾರ, ಆಧಾರ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ(ಬ್ಯಾಂಕ್ ಪುಸ್ತಕದ ಝೆರಾಕ್ಸ್ ಪ್ರತಿ ಲಗತ್ತಿಸಿ) ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿಹಾಳೆಯ ಮೇಲೆ ಸ್ವ ವಿವರದೊಂದಿಗೆ ಸಂಬಂಧಪಟ್ಟ ಜಿಲ್ಲಾ ಸಹಾಯಕ ನಿರ್ದೇಶಕರು, ಅಕಾಡೆಮಿಗಳ, ಪ್ರಾಧಿಕಾರಗಳ ರಿಜಿಸ್ಟ್ರಾರ್‍ಗಳಿಗೆ ಇ-ಮೇಲ್, ವಾಟ್ಸಾಪ್ ಹಾಗೂ ಖುದ್ದಾಗಿ ಅರ್ಜಿಯನ್ನು ಎ.27ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿದೆ.

ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಅಕಾಡೆಮಿಗಳ, ಪ್ರಾಧಿಕಾರಗಳ ರಿಜಿಸ್ಟ್ರಾರ್‍ನ್ನು ಸಂಪರ್ಕಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News