ಆರ್ಥಿಕ ಸಹಾಯಕ್ಕೆ ಸಾಹಿತಿಗಳಿಂದ ಅರ್ಜಿ ಆಹ್ವಾನ

Update: 2020-04-22 18:31 GMT

ಬೆಂಗಳೂರು, ಎ.22: ಕೊರೋನ ಸೋಂಕಿನ ಪರಿಣಾಮದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾಹಿತಿ-ಕಲಾವಿದರಿಗೆ ಹಣಕಾಸಿನ ನೆರವು ನೀಡಲು ಕರ್ನಾಟಕ ಸಾಹಿತ್ಯ ಅಕಾಡೆಮಿ ಮುಂದಾಗಿದೆ.

ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಸಾಹಿತಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆಯ ವಿವರಗಳನ್ನು ನಮೂದಿಸಿ ಸಾಹಿತ್ಯ ಅಕಾಡೆಮಿಯ ಇ-ಮೇಲ್ sahithya.academy@gmail.com ಇಲ್ಲಿಗೆ ಅಥವಾ ವಾಟ್ಸಪ್ ನಂ.9449738908ಕ್ಕೆ ಎ.24ರ ಒಳಗಾಗಿ ಅರ್ಜಿಗಳನ್ನು ಕಳುಹಿಸಬೇಕು. ಅರ್ಜಿ ನಮೂನೆ ಮತ್ತು ವಿವರಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ www.karnatakasahithyaacademy.org ನಲ್ಲಿ ಪಡೆಯಬಹುದಾಗಿದೆ.

ಸೂಚನೆ: ಆರ್ಥಿಕ ಸಂಕಷ್ಟದಲ್ಲಿರುವ ಸಾಹಿತಿಗಳಾಗಿದ್ದು, 10 ವರ್ಷಗಳಿಂದ ಸಾಹಿತ್ಯ ರಚನೆಯಲ್ಲಿ ತೊಡಗಿರಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು. ಇಂತವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News