ರಾಜ್ಯದ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತ ಸೇರಿ 26 ಮಂದಿಗೆ ಕೊರೋನ ದೃಢ

Update: 2020-04-25 15:17 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.25: ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ಮದ್ಯೆ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತರೊಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶನಿವಾರ ಒಟ್ಟು 26 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. ಈ ಪೈಕಿ ಪತ್ರಕರ್ತರೊಬ್ಬರಿಗೂ ಕೊರೋನ ತಗುಲಿರುವುದಾಗಿ ವರದಿಯಾಗಿದೆ. ಇವರು ಬಿಬಿಎಂಪಿ ವ್ಯಾಪ್ತಿಯ ಕಂಟೈನ್ಮೆಂಟ್ ಝೋನ್ ಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಇದುವರೆಗೆ 500 ಮಂದಿಗೆ ಕೊರೋನ ಪಾಸಿಟಿವ್ ಬಂದಿದೆ. ಈ ಪೈಕಿ 158 ಮಂದಿ ಗುಣಮುಖರಾಗಿದ್ದಾರೆ ಮತ್ತು 18 ಜನರು ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News