12 ಗಂಟೆಗಳ ಕಾಲ ಅರ್ನಬ್ ಗೋಸ್ವಾಮಿ ವಿಚಾರಣೆ ನಡೆಸಿದ ಪೊಲೀಸರು

Update: 2020-04-27 18:01 GMT

ಮುಂಬೈ: ಪಾಲ್ಘಾರ್ ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೋನಿಯಾ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿ ಸ್ಥಾಪಕ ಅರ್ನಬ್ ಗೋಸ್ವಾಮಿಯವರನ್ನು ಪೊಲೀಸರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಇಂದು ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಸೋನಿಯಾ ಗಾಂಧಿ ಕುರಿತ ಹೇಳಿಕೆಗಾಗಿ ನನ್ನ ವಿಚಾರಣೆಗೆ ಕರೆಸಲಾಗಿತ್ತು. 12 ಗಂಟೆಗಳ ಕಾಲ ವಿಚಾರಣೆ ನಡೆದಿದೆ. ನಾನು ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ. ಸತ್ಯ ಜಯಿಸಲಿದೆ ಎನ್ನುವ ವಿಶ್ವಾಸವಿದೆ” ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News