ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ ವರ್ಗಾವಣೆ
Update: 2020-04-28 20:19 IST
ಕಲಬುರಗಿ, ಎ.28: ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ ಅವರನ್ನು ಕರ್ನಾಟಕ ಪರೀಕ್ಷಾ ಮಂಡಳಿ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಸುರಲ್ಕರ್ ವಿಕಾಸ ಕಿಶೋರ್ ಅವರನ್ನು ನೇಮಕ ಮಾಡಲಾಗಿದ್ದು, ಕಿಶೋರ್ ಅವರು ಕರ್ನಾಟಕ ಪರೀಕ್ಷಾ ಮಂಡಳಿ ನಿರ್ದೇಶಕ ಹುದ್ದೆಯಲ್ಲಿದ್ದರು.