×
Ad

ದ.ಕ. ಜಿಲ್ಲೆ : ಪಾನ್ ಮಸಾಲ, ಜರ್ದಾ, ಖೈನಿ ನಿಷೇಧ

Update: 2020-04-29 18:27 IST

ಮಂಗಳೂರು, ಎ.29: ಸಾರ್ವಜನಿಕ ಹಿತಾದೃಷ್ಟಿಯಿಂದ ದ.ಕ. ಜಿಲ್ಲಾದ್ಯಂತ ಮುಂದಿನ ಆದೇಶದವರೆಗೂ ಪಾನ್ ಮಸಾಲ, ಜರ್ದಾ, ಖೈನಿ ಮುಂತಾದ ಜಗಿಯುವ ತಂಬಾಕು ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕೊರೋನ ವೈರಸ್ ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಈ ಮಧ್ಯೆ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೊರೋನ ವೈರಸ್ ರೋಗವು ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.

ಹಾಗಾಗಿ ಸಾರ್ವಜನಿಕ ಹಿತಾದೃಷ್ಟಿಯಿಂದ ದ.ಕ. ಜಿಲ್ಲಾದ್ಯಂತ ಮುಂದಿನ ಆದೇಶದವರೆಗೂ ಪಾನ್ ಮಸಾಲ, ಜರ್ದಾ, ಖೈನಿ,ಮುಂತಾದ ಜಗಿಯುವ ತಂಬಾಕು ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಉಲ್ಲಂಘನೆಯಾದಲ್ಲಿ ವಿವಿಧ ಸೆಕ್ಷನ್‌ನಡಿ ಪ್ರಕರಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News