ರಾಜ್ಯದಲ್ಲಿ 600ರ ಗಡಿದಾಟಿದ ಕೊರೋನ ಸೋಂಕಿತರ ಸಂಖ್ಯೆ, ಒಟ್ಟು 25 ಸಾವು

Update: 2020-05-02 11:55 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.2: ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಕೊರೋನ ಸೋಂಕಿನಿಂದ ಒಟ್ಟು ಮೂವರು ಸಾವು ಹಾಗೂ ಒಟ್ಟು 12 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 601ಕ್ಕೇರಿದೆ ಹಾಗೂ ಮೃತರ ಸಂಖ್ಯೆ 25ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟ್‌ನಲ್ಲಿ ಶುಕ್ರವಾರ ಸಂಜೆ 5ರಿಂದ ಇಂದು ಸಂಜೆ 5 ಗಂಟೆಯೊಳಗೆ ಮೂರು ಸಾವು, ಹೊಸ 12 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಿದೆ.

ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ಜಿಲ್ಲೆಯ 82 ವರ್ಷದ ವೃದ್ಧ ಹಾಗೂ ಬೆಂಗಳೂರಿನ 63 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೊತೆಗೆ, ಬೆಂಗಳೂರು ನಗರದಲ್ಲಿ 4, ತುಮಕೂರಿನಲ್ಲಿ 2, ವಿಜಯಪುರದಲ್ಲಿ 2, ಬೀದರ್, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆಯಲ್ಲಿ ತಲಾ ಒಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

ಒಟ್ಟಾರೆ ಇದುವರೆಗೆ ರಾಜ್ಯದಲ್ಲಿ ಪಾಸಿಟಿವ್ ಬಂದ 601 ಪ್ರಕರಣಗಳಲ್ಲಿ 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 25 ಮಂದಿ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News