ದ್ವೇಷ ಹರಡಲು ಯತ್ನಿಸಿದ ಆರೋಪ: ಅರ್ನಬ್ ಗೋಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಿಸಿದ ಮುಂಬೈ ಪೊಲೀಸರು

Update: 2020-05-03 16:03 GMT

ಹೊಸದಿಲ್ಲಿ: ಸಮಾಜದಲ್ಲಿ ದ್ವೇಷ ಹುಟ್ಟಿಸಲು ಯತ್ನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು ‘ರಿಪಬ್ಲಿಕ್ ಟಿವಿ’ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಪೈಧೋನೀ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾಗಿ ಮತ್ತು ಎಪ್ರಿಲ್ 14ರ ವಲಸೆ ಕಾರ್ಮಿಕರ ಪ್ರತಿಭಟನೆಗೆ ಯಾವುದೇ ಸಂಬಂಧವಿರದಿದ್ದರೂ ಬಾಂದ್ರಾದ ಮಸೀದಿಯನ್ನು ಗುರಿ ಮಾಡಿದ್ದಕ್ಕಾಗಿ ರಝಾ ಎಜುಕೇಶನಲ್ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ಇರ್ಫಾನ್ ಅಬೂಬಕರ್ ಶೈಖ್ ಎಂಬವರು ಪೊಲೀಸರಿಗೆ ಅರ್ನಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ಚಾನೆಲ್ ವಿರುದ್ಧ ದೂರು ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News