ಕರ್ತವ್ಯದಲ್ಲಿಯೇ ಮದ್ಯ ಸೇವನೆ: ಪೇದೆ ಅಮಾನತು

Update: 2020-05-05 11:29 GMT

ಚಿತ್ರದುರ್ಗ, ಮೇ 5: ಕರ್ತವ್ಯನಿರತ ಪೊಲೀಸ್ ಪೇದೆ, ಮದ್ಯ ಸೇವಿಸಿದ ಆರೋಪದಡಿ ಅವರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ರಾಜು ಚೌಹಾಣ್ ಅಮಾನತುಗೊಂಡಿದ್ದಾರೆ ಎನ್ನಲಾಗಿದೆ.

ಏನಿದು ಘಟನೆ?: ಪೇದೆಯೊಬ್ಬರು ಕರ್ತವ್ಯ ಮರೆತು ಸಮವಸ್ತ್ರದಲ್ಲೇ ಚಿತ್ರದುರ್ಗ ತಾಲೂಕಿನ ಪಲ್ಲವಗೆರೆ ಗ್ರಾಮದಲ್ಲಿ ಮದ್ಯ ಸೇವನೆ ಮಾಡಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದನ್ನು ಪರಿಶೀಲಿಸಿದ ಚಿತ್ರದುರ್ಗ ಜಿಲ್ಲಾ ಎಸ್ಪಿ ಅಮಾನತು ಮಾಡಿ, ಆದೇಶಿಸಿದ್ದಾರೆ  ಎಂದು ತಿಳಿದುಬಂದಿದೆ.

ನಿವೃತ್ತ ಯೋಧರಾಗಿರುವ ರಾಜು ಚೌಹಾಣ್, 2017ರಲ್ಲಿ ಸೇನೆಯಿಂದ ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ಹೇಳಲಾಗುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News