ರಾಘವೇಶ್ವರ ಶ್ರೀ ಮಾನಹಾನಿಗೆ ಯತ್ನ ಆರೋಪ: ಪ್ರಕರಣದ ವಿಚಾರಣೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Update: 2020-05-06 17:17 GMT

ಧಾರವಾಡ, ಮೇ 6:  ನಕಲಿ ಅಶ್ಲೀಲ ಸಿಡಿ ತಯಾರಿಸಿ ರಾಘವೇಶ್ವರ ಶ್ರೀ ಮಾನಹಾನಿಗೆ ಪ್ರಯತ್ನಿಸಿದ್ದ ಪ್ರಕರಣದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್‍ನ ಧಾರವಾಡ ಪೀಠ ವಜಾ ಮಾಡಿದೆ.

ಸ್ವಾಮೀಜಿಯನ್ನು ಹೋಲುವ ವ್ಯಕ್ತಿಯನ್ನಿರಿಸಿಕೊಂಡು, ತಂತ್ರಜ್ಞಾನ ಬಳಸಿ ಸಿಡಿ ತಯಾರಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು 2010ರಲ್ಲಿ ರಾಮಚಂದ್ರಾಪುರ ಮಠ ದೂರು ಸಲ್ಲಿಸಿತ್ತು. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಕುಮಟಾ ಜೆಎಂಎಫ್‍ಸಿ ಕೋರ್ಟ್‍ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಮೊದಲು ಆರೋಪಿ ಮನವಿಯನ್ನು ಅಲ್ಲಿನ ಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಮನವಿ ಸಲ್ಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News