ಮದ್ಯ ಮಾರಾಟ: ಅಧಿಕ ದರ ವಸೂಲಿ ಮಾಡಿದರೆ ಲೈಸನ್ಸ್ ರದ್ದು; ಸಚಿವರ ಎಚ್ಚರಿಕೆ

Update: 2020-05-08 16:20 GMT

ಮಂಗಳೂರು,ಮೇ.8: ಜಿಲ್ಲೆಯ ಮದ್ಯದಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ  ಸಾರ್ವಜನಿಕರಿಂದ ದೂರು ಬರುತ್ತಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ನಡೆದ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಅಧಿಕ ದರ ವಸೂಲಿ ಮಾಡುವ ಪ್ರಕರಣ ಕಂಡು ಬಂದರೆ ಅಂತಹ ಮದ್ಯದಂಗಡಿಗಳ ಪರವಾನಿಗೆ ರದ್ದುಪಡಿಸಲು ಸೂಚನೆ ನೀಡಿದರು.

ಈ ಬಗ್ಗೆ ಅಬಕಾರಿ ಅಧಿಕಾರಿಗಳು ಎಲ್ಲಾ ಮದ್ಯದಂಗಡಿಗಳ ಮೇಲೆ ನಿಗಾವಹಿಸಲು ಅವರು ಸೂಚಿಸಿದರು.

ಅಬಕಾರಿ ಉಪ ಆಯುಕ್ತೆ ಶೈಲಜಾ ಕೋಟೆ ಮಾತನಾಡಿ, ಮದ್ಯದಂಗಡಿ, ಬಾರ್ ಗಳಲ್ಲಿ ಅಧಿಕ ದರ ವಸೂಲಿ ಪ್ರಕರಣ  ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ತಿಳಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News