ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ: ಡಿಸಿಎಂ ಅಶ್ವಥ್ ನಾರಾಯಣ

Update: 2020-05-08 17:32 GMT

ಬೆಂಗಳೂರು, ಮೇ 8: ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ 2019-20ನೇ ಸಾಲಿನ ಬಾಕಿ ಗೌರವಧನವನ್ನು ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಇನ್ನುಳಿದ ಬಾಕಿ ಹಣ ಬಿಡುಗಡೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಒಪ್ಪಿದ್ದು, ಮುಂದಿನ ವಾರ ಉಪನ್ಯಾಸಕರಿಗೆ ನೀಡಲಾಗುವುದು. ಹೀಗಾಗಿ ಹಣ ಬಿಡುಗಡೆ ಮಾಡಿದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News