ಅಪಪ್ರಚಾರ ಸಭ್ಯ ಸಮಾಜದ ಲಕ್ಷಣವಲ್ಲ: ಅಮಿತ್ ಶಾ ಆರೋಗ್ಯದ ಬಗ್ಗೆ ಬಿಎಸ್ವೈ ಪ್ರತಿಕ್ರಿಯೆ
Update: 2020-05-09 15:52 GMT
ಬೆಂಗಳೂರು, ಮೇ 9: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕಪೋಲಕಲ್ಪಿತ ಸುಳ್ಳು ಸುದ್ದಿಗಳಿಂದ ಅಪಪ್ರಚಾರ ನಡೆಸುವುದು ಸಭ್ಯ ಸಮಾಜದ ಲಕ್ಷಣವಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, "ದುರುದ್ದೇಶಪೂರ್ವಕವಾಗಿ ಕಪೋಲಕಲ್ಪಿತ ಸುಳ್ಳು ಸುದ್ದಿಗಳಿಂದ ಅಪಪ್ರಚಾರ ನಡೆಸುವುದು ಸಭ್ಯ ಸಮಾಜದ ಲಕ್ಷಣವಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕರ್ತರ ಅಭಿಮಾನ ಇಮ್ಮಡಿಯಾಗಿದೆ" ಎಂದು ತಿಳಿಸಿದ್ದಾರೆ.