ಕರ್ತವ್ಯ ಲೋಪ ಆರೋಪ: ಆಲ್ದೂರು ಠಾಣಾಧಿಕಾರಿ ಸುನೀತಾ ಅಮಾನತು

Update: 2020-05-10 17:48 GMT

ಚಿಕ್ಕಮಗಳೂರು, ಮೇ 10: ಕರ್ತವ್ಯ ಲೋಪ ಎಸಗಿದ್ದ ಆರೋಪದ ಮೇರೆಗೆ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ಕೆ.ಆರ್.ಸುನೀತಾ ಅಮಾನತುಗೊಂಡಿದ್ದಾರೆ.

ಇತ್ತೀಚೆಗೆ ಚಿಕ್ಕಮಗಳೂರು ನಗರದಿಂದ ಆಲ್ದೂರು ಠಾಣೆಗೆ ವರ್ಗಾವಣೆಗೊಂಡಿದ್ದ ಎಸ್ಸೈ ಸುನೀತಾ ಅವರು ಪ್ರಕರಣವೊಂದರಲ್ಲಿ ಆರೋಪಿಗಳೊಂದಿಗೆ ಶಾಮೀಲಾಗಿದ್ದರೆಂಬ ಅರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲಾಖೆ ಆಂತರಿಕಾ ತನಿಖೆ ಕೈಗೊಂಡಿತ್ತೆಂದು ತಿಳಿದುಬಂದಿದೆ.

ತನಿಖೆ ವೇಳೆ ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ಐಜಿಪಿ ಸುನೀತಾ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ರವಿವಾರ ಆದೇಶಿಸಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ವಾರ್ತಾಭಾರತಿಗೆ ಮಾಹಿತಿ ನೀಡಿದ್ದು, ಎಸ್ಸೈ ಸುನೀತಾ ಅವರ ಮೇಲಿದ್ದ ಆರೋಪದ ಬಗ್ಗೆ ಹೆಚ್ಚು ಮಾಹಿತಿ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News