ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-05-11 16:22 GMT

 ಕಾರ್ಕಳ, ಮೇ 11: ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣಿ ದೇವಾಡಿಗ (55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 10ರಂದು ಸಂಜೆ ವೇಳೆ ತಾನು ಕೆಲಸ ಮಾಡಿಕೊಂಡಿದ್ದ ಹೋಟೇಲ್‌ನ ಹಿಂಬಂದಿ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ವೈಯಕ್ತಿಕ ಕಾರಣದಿಂದ ಮನನೊಂದ ಉಳ್ಳೂರು ಗ್ರಾಮದ ಉಗ್ರಾಣಿಬೆಟ್ಟುವಿನ ಗೋಪಾಲ ನಾಯ್ಕ(49) ಎಂಬವರು ಮೇ 9ರಂದು ರಾತ್ರಿ ಕೋಣಿ ಗ್ರಾಮದ ಸಟ್ಟಾಡಿ ಹೊಳೆಯ ಬದಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News