ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

Update: 2020-05-11 17:38 GMT

ಬಳ್ಳಾರಿ, ಮೇ 11: ಇಲ್ಲಿನ ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಿಗೇರಿ ಗ್ರಾಮದಲ್ಲಿ ವಿದ್ಯುತ್ ವಾಹಕ ತಂತಿ ಸ್ಪರ್ಶಿಸಿ ರೈತ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮೋರಿಗೇರಿ ಗ್ರಾಮದ ಬಾವಿಹಳ್ಳಿ ಕಾಳಪ್ಪ (55) ಸಾವನ್ನಪ್ಪಿರುವ ರೈತನಾಗಿದ್ದು, ತನ್ನ ಜಮೀನಿನಲ್ಲಿ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋದಾಗ ಮೋಟಾರ್ ಪಂಪ್ ಸಮಸ್ಯೆಯಾಗಿದೆ. ಹೀಗಾಗಿ ರೈತ ಕಾಳಪ್ಪ ತಾವೇ ರಿಪೇರಿ ಮಾಡಲು ಹೋಗಿ ವಿದ್ಯುತ್ ವಾಹಕ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಗರಿಬೊಮ್ಮನಹಳ್ಳಿ ಪಟ್ಟಣದ ಸರಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News