ಯಾದಗಿರಿ ಜಿಲ್ಲೆ ಮಂಗಳವಾರ ಮಧ್ಯರಾತ್ರಿವರೆಗೆ ಸಂಪೂರ್ಣ ಲಾಕ್‍ಡೌನ್‍: ಜಿಲ್ಲಾಧಿಕಾರಿ ಕೂರ್ಮಾರಾವ್

Update: 2020-05-12 11:14 GMT

ಯಾದಗಿರಿ, ಮೇ 12: ಕೊರೋನ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯಾದ್ಯಂತ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿವರೆಗೆ ಸಂಪೂರ್ಣ ಲಾಕ್‍ಡೌನ್‍ಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಆದೇಶಿಸಿದ್ದಾರೆ.

ಸೋಮವಾರ ಮಧ್ಯರಾತ್ರಿ 1 ಗಂಟೆಗೆ ಆದೇಶ ಹೊರಡಿಸಿದ್ದು, ಔಷಧಾಲಯ ಮತ್ತು ತುರ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಲಾಕ್‍ಡೌನ್ ಮಾಡಲು ಆದೇಶದಲ್ಲಿ ತಿಳಿಸಿದ್ದಾರೆ. ನಗರಸಭೆ ವತಿಯಿಂದ ಧ್ವನಿವರ್ಧಕಗಳ ಮೂಲಕ ಅಂಗಡಿ ಮುಚ್ಚುವಂತೆ ತಿಳಿಸಿದ್ದಾರೆ. ಪೊಲೀಸರು ರಸ್ತೆಗಿಳಿದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಸೋಮವಾರ ರಾತ್ರಿಯಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಬಂದಿದೆ ಎನ್ನುವ ಆಡಿಯೊ ವೈರಲ್ ಆಗಿದೆ. ಜಿಲ್ಲಾಡಳಿತದಿಂದ ಯಾವುದೇ ಸ್ಪಷ್ಟನೆ ಈ ಬಗ್ಗೆ ನೀಡಿಲ್ಲ. ಆದರೂ ಆಡಿಯೊ ಕೇಳಿದ ಜನರು ಆತಂಕದಿಂದ ಕಾಲಕಳೆಯುತ್ತಿದ್ದಾರೆ. ಹಸಿರು ವಲಯದಲ್ಲಿರುವ ಜಿಲ್ಲೆಗೆ ಕೊರೋನ ಆತಂಕ ಮನೆ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News