ವಲಸೆ ಕಾರ್ಮಿಕರ ಮೇಲೆ ಹಲ್ಲೆ ಆರೋಪ: ಎಎಸ್ಸೈ ಅಮಾನತು

Update: 2020-05-12 16:04 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 12: ವಲಸೆ ಕಾರ್ಮಿಕರ ಮೇಲೆ ಹಲ್ಲೆ ಆರೋಪ ಸಂಬಂಧ ಎಎಸ್ಸೈ ಒಬ್ಬರನ್ನು ನಗರದ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅಮಾನತು ಮಾಡಿದ್ದಾರೆ.

ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಎಎಸ್ಸೈ ರಾಜಾ ಸಾಬ್ ಎಂಬವರು ಅಮಾನತು ಆಗಿದ್ದಾರೆ.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗೆ ನೋಂದಣಿ ಮಾಡಿಸಿಕೊಳ್ಳಲು ಬಂದಿದ್ದರು. ಈ ವೇಳೆ ನೋಂದಣಿ ವಿಚಾರವಾಗಿ ಗದರಿಸಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಎಎಸ್ಸೈ ಅನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News