ಇಂದು ಸಂಜೆ 4 ಗಂಟೆಗೆ ಆರ್ಥಿಕ ಪ್ಯಾಕೇಜ್ ಕುರಿತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ

Update: 2020-05-13 05:46 GMT

ಹೊಸದಿಲ್ಲಿ,ಮೇ 13: ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾಡಿರುವ ಭಾಷಣದಲ್ಲಿ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್‌ನ್ನು ಘೋಷಿಸಿದ್ದರು. ಈ ಪ್ಯಾಕೇಜ್ ಕುರಿತು ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡಲಿದ್ದಾರೆ ಎಂದು ಹೇಳಿದ್ದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಪ್ರಧಾನಿ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನ ಉತ್ತಮ ಅಂಶಗಳನ್ನು ಅನಾವರಣಗೊಳಿಸಲಿದ್ದಾರೆ. ಈ ಪ್ಯಾಕೇಜ್ ಸ್ವಾವಲಂಬಿ ಭಾರತದ 'ಆತ್ಮನಿರ್ಭರ್ ಭಾರತ್' ಧ್ಯೇಯವನ್ನು ಸಾಧಿಸುವ ಗುರಿ ಹೊಂದಿದೆ ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News