×
Ad

ಅಕ್ರಮವಾಗಿ ರಾಜ್ಯ ಪ್ರವೇಶಿಸಿದರೆ ಕ್ರಿಮಿನಲ್ ಮೊಕದ್ದಮೆ: ಬೆಳಗಾವಿ ಜಿಲ್ಲಾಧಿಕಾರಿ ಎಚ್ಚರಿಕೆ

Update: 2020-05-14 21:57 IST
ಡಾ.ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ, ಮೇ 14: ಮಾರ್ಗಸೂಚಿ ಅನುಸಾರ ಸೂಕ್ತ ಅನುಮತಿ ಪತ್ರ(ಇ-ಪಾಸ್) ಪಡೆಯದೆ ನೆರೆಯ ರಾಜ್ಯಗಳಿಂದ ಬೆಳಗಾವಿ ಜಿಲ್ಲೆಯನ್ನು ಪ್ರವೇಶಿಸಿದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿರುತ್ತದೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೇವಾ ಸಿಂಧು ಮೂಲಕ ಇ-ಪಾಸ್ ಪಡೆಯದೆ ಮಹಾರಾಷ್ಟ್ರ ಸೇರಿ ಇತರ ನೆರೆಯ ರಾಜ್ಯಗಳ ಮೂಲಕ ಜಿಲ್ಲೆಯನ್ನು ಯಾರಾದರೂ ಪ್ರವೇಶಿಸಿದ್ದರೆ ಅಂಥವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಇದೇ ರೀತಿ ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕೆಂದು ಸೂಚಿಸಿದ್ದಾರೆ.

ಈ ರೀತಿ ಅಕ್ರಮವಾಗಿ ಪ್ರವೇಶಿಸಿದವರೂ ಒಂದು ವೇಳೆ ಸ್ವಯಂಪ್ರೇರಣೆಯಿಂದ ಮುಂದೆ ಬಂದು ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಅನ್ಯ ರಾಜ್ಯಗಳಿಂದ ಅಕ್ರಮವಾಗಿ ಬಂದಿರುವವರ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿ ಸಂಖ್ಯೆ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಕೋರಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News