ಡಿಕೆಶಿ ಹುಟ್ಟುಹಬ್ಬ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

Update: 2020-05-15 09:04 GMT

ಮಂಗಳೂರು, ಮೇ 15: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ 55ನೇ ಹುಟ್ಟುಹಬ್ಬದ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರವು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಕಂಕನಾಡಿಯ ಹೈಲಾಂಡ್ ಆಸ್ಪತ್ರೆ ಸಮೀಪದ ಜನತಾ ಲಂಚ್ ಹೊಂನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.

ಸುಮಾರು ನೂರರಷ್ಟು ಕಾರ್ಯಕರ್ತರು ರಕ್ತದಾನ ಮಾಡಿದರು.

ಶಾಸಕರಾದ ಯುಟಿ ಖಾದರ್, ಐವನ್ ಡಿಸೋಜ, ಮಾಜಿ ಸಚಿವರಾದ ಬಿ.ರಮನಾಥ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮನಪಾ ಸದಸ್ಯರಾದ ಪ್ರವೀನ್ ಚಂದ್ರ ಆಳ್ವ, ಎಸಿ ವಿನಯರಾಜ್ , ನವೀನ್ ಡಿಸೋಜ, ರವೂಫ್ ಬಜಾಲ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲಾ ಗಟ್ಟಿ, ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷ ಮೆರಿಲ್ ರೇಗೊ, ಗಿರೀಶ್ ಆಳ್ವ, ಯು.ಟಿ.ತೌಸಿಫ್, ಅಭಿನಂದನ್, ಜಿಲ್ಲಾ ಪದಾಧಿಕಾರಿಗಳಾದ ಶಬೀರ್ ಕೆಂಪಿ, ಬಶೀರ್ ಪರ್ಲಡ್ಕ, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ರೂಪೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News