ಕಾಂಗ್ರೆಸ್‍ನಿಂದ 5 ಸಾವಿರ ಕುಟುಂಬಗಳಿಗೆ ಪರಿಹಾರ ಕಿಟ್ ವಿತರಣೆ

Update: 2020-05-15 12:11 GMT

ಬೆಂಗಳೂರು, ಮೇ 15: ಕೊರೋನದಿಂದ ಸಂಕಷ್ಟಕ್ಕೆ ಸಿಲುಕಿರುವ 5 ಸಾವಿರಕ್ಕೂ ಹೆಚ್ಚು ಬಡವರಿಗೆ, ಕೂಲಿ ಕಾರ್ಮಿಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ದಿನಸಿ ಕಿಟ್‍ನ್ನು ವಿತರಿಸಲಾಯಿತು.

ಮಹದೇವಪುರ ವಿಧಾನಸಭಾಕ್ಷೇತ್ರದ ಬಿದರಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಡವರಿಗೆ, ಅಸಂಘಟಿತ ಕೂಲಿ ಕಾರ್ಮಿಕರಿಗೆ ಲಾಕ್‍ಡೌನ್ ಪರಿಣಾಮ, ದಿನಸಿ ಪದಾರ್ಥಗಳನ್ನು ಹಗದೂರು ವಾರ್ಡ್ ಪಾಲಿಕೆ ಸದಸ್ಯ ಉದಯಕುಮಾರ್, ಮುಖಂಡರಾದ ನಲ್ಲೂರಹಳ್ಳಿ ನಾಗೇಶ್‍ರವರ ಸಹಕಾರದೊಂದಿಗೆ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಅತ್ಯಂತ ಸರಳವಾಗಿ ಡಿ.ಕೆ.ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು ಎಂದು ಕೆಪಿಸಿಸಿ ಪರಿಶಿಷ್ಟ ವಿಭಾಗದ ರಾಜ್ಯ ಸಂಚಾಲಕ ಎಂ. ಗೋವಿಂದರಾಜ್ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News