ಶಾಲಾ ವೇಳಾಪಟ್ಟಿಯ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ

Update: 2020-05-16 14:21 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 16: ಕೋವಿಡ್-19ರ ಹಿನ್ನೆಲೆಯಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ನಿರ್ದೇಶಕರು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 15ರಂದು ನೀಡಿರುವ ಟಿಪ್ಪಣಿ ಇಲಾಖೆಯಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಾಗಿ ತಯಾರಿಸಿರುವ ಮಾಹಿತಿಯಾಗಿರುತ್ತದೆ. ಇದು ಅಧಿಕೃತ ಆದೇಶ ಅಥವಾ ಸುತ್ತೋಲೆ ಆಗಿರುವುದಿಲ್ಲ. ಈ ಸಂಬಂಧ ಶಿಕ್ಷಣ ಇಲಾಖೆಯಲ್ಲಿ ಈವರೆಗೂ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿರುವುದಿಲ್ಲವೆಂದು ಇಲಾಖೆಯ ಆಯುಕ್ತರು ಪ್ರಕಟನೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News