ಪೊಲೀಸ್ ಪೇದೆಯ ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ಬಂಧನ

Update: 2020-05-16 15:04 GMT

ಬೆಂಗಳೂರು, ಮೇ 16: ಪೊಲೀಸ್ ಪೇದೆಯೊಬ್ಬರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮೂವರನ್ನು ಜೆಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಮುದ್ದಮ್ಮ ಗಾರ್ಡನ್ ನಿವಾಸಿಗಳಾದ ರಿಝ್ವಾನ್ ಖಾನ್, ಸುಲ್ತಾನ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ವಿವರ: ಮೇ 8 ರಂದು ರಾತ್ರಿ 8.15ರ ಸುಮಾರಿನಲ್ಲಿ ಜೆಸಿ ನಗರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಸಂತೋಷ್ ಕುಮಾರ್ ಮುದ್ದಮ್ಮ ಗಾರ್ಡನ್‍ಗೆ ಕರ್ತವ್ಯಕ್ಕೆ ತೆರಳಿದ್ದರು. ಇಲ್ಲಿನ 2ನೆ ಕ್ರಾಸ್‍ನಲ್ಲಿ ಯುವಕರು ಗುಂಪಾಗಿ ನಿಂತಿರುವುದನ್ನು ಗಮನಿಸಿ ಅವರ ಬಳಿ ಹೋಗಿದ್ದಾರೆ. 7 ಗಂಟೆಯಿಂದ ರಾತ್ರಿ ಕರ್ಫ್ಯೂ ಇರುವುದರಿಂದ ಯಾರೂ ರಸ್ತೆಯಲ್ಲಿ ನಿಲ್ಲಬಾರದು. ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಗುಂಪಾಗಿ ನಿಂತಿರುವುದನ್ನು ಪೇದೆ ಅವರು ಪ್ರಶ್ನಿಸಿ, ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಪೇದೆ ಜತೆ ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ತಪ್ಪಿತಸ್ಥರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News