ಲಾರಿ ಢಿಕ್ಕಿ: ಬೈಕ್ ಸವಾರ ಕಾರ್ಮಿಕ ಮೃತ್ಯು
Update: 2020-05-16 16:42 GMT
ಬೆಂಗಳೂರು, ಮೇ 16: ವೇಗವಾಗಿ ಸಾಗಿಬಂದ ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಮಾದನಾಯಕಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ,
ಉತ್ತರ ಪ್ರದೇಶ ಮೂಲದ ಬೈಕ್ ಸವಾರ ಮುಷ್ತಾಕ್(36) ಮೃತ ಕಾರ್ಮಿಕ ಎಂದು ತಿಳಿದುಬಂದಿದೆ.
ಬೆಂಗಳೂರು ಉತ್ತರ ತಾಲೂಕಿನ ಕಾಚೋಹಳ್ಳಿ ಗೇಟ್ ನಿವಾಸಿಯಾಗಿದ್ದ ಮುಸ್ತಾಕ್, ಸ್ಥಳೀಯ ಐಎಚ್ ಎಂಟರ್ ಪ್ರೈಸಸ್ನಲ್ಲಿ ಕೆಲಸ ಮಾಡುತ್ತಿದ್ದ. ಮುಷ್ತಾಕ್ ತನ್ನ ಹೆಂಡತಿ ಮತ್ತು ಮಗು ಜೊತೆ ಬೈಕ್ನಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ತೀವ್ರಗಾಯಗೊಂಡಿರುವ ಮುಷ್ತಾಕ್, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಸಂಬಂಧ ಮಾದನಾಯಕಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.