ಲಾರಿಗೆ ಕಾರು ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು
Update: 2020-05-17 12:56 GMT
ಬಳ್ಳಾರಿ, ಮೇ 17: ರಸ್ತೆಯಲ್ಲಿ ನಿಂತ ಮಳೆ ನೀರಿನಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾನಾಹೊಸಳ್ಳಿಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಕಾರು ಚಾಲಕ ದೇವರಾಜ್ (21), ಭೀಮರಾಯ (38), ಅಂಜಲಿ ದೇವಿ (14) ಎಂಬುವರು ಮೃತರು ಎಂದು ಪೊಲೀಸರು ಗುರುತಿಸಿದ್ದಾರೆ.
ಮೃತರು ಮುದ್ದೇಬಿಹಾಳ ತಾಲೂಕಿನವರಾಗಿದ್ದು, ಬೆಂಗಳೂರಿನಿಂದ ಸ್ವಗ್ರಾಮಗಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಕಾನಾಹೊಸಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.