ಹಿರಿಯ ಪೊಲೀಸ್ ಅಧಿಕಾರಿಗೆ ಕಬ್ಬನ್ ಪಾರ್ಕಿನಲ್ಲಿ ವಾಕಿಂಗ್‍ಗೆ ಸಮ್ಮತಿ: ತೋಟಗಾರಿಕಾ ಇಲಾಖೆ ಅಧಿಕಾರಿ ಅಮಾನತು

Update: 2020-05-18 17:23 GMT

ಬೆಂಗಳೂರು, ಮೇ 18: ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ನಗರದ ಕಬ್ಬನ್ ಪಾರ್ಕಿನಲ್ಲಿ ವಾಕಿಂಗ್ ಮಾಡಲು ಅವಕಾಶ ಕಲ್ಪಿಸಿದ ಆರೋಪದಡಿ ತೋಟಗಾರಿಕಾ ವಿಭಾಗದ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಕರ್ನಾಟಕದ ತೋಟಗಾರಿಕೆ ಇಲಾಖೆ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಲಾಕ್‍ಡೌನ್ ಅವಧಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ, ಸಾರ್ವಜನಿಕರ ಗುಂಪನ್ನು ಕಬ್ಬನ್ ಪಾರ್ಕಿನೊಳಕ್ಕೆ ಪ್ರವೇಶಿಸಲು ಅನುಮತಿಸಿದ್ದಕ್ಕಾಗಿ ಕಬ್ಬನ್ ಪಾರ್ಕ್ ಉಪನಿರ್ದೇಶಕಿ ಕುಸುಮಾ ಅವರನ್ನು ಅಮಾನತುಗೊಳಿಸಿದೆ ಎಂದು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಮಂಜಪ್ಪ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News