ಮಂಗಳೂರು: ಊರಿಗೆ ತೆರಳಲು ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ವಲಸೆ ಕಾರ್ಮಿಕರ ಧರಣಿ

Update: 2020-05-19 06:55 GMT

ಮಂಗಳೂರು, ಮೇ 19: ತಮ್ಮ ಊರುಗಳಿಗೆ ತೆರಳಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಲಸೆ ಕಾರ್ಮಿಕರು ಮಂಗಳವಾರ ನಗರದ ಮಿಲಾಗ್ರಿಸ್ ಕಾಲೇಜ್ ಬಳಿ ಧರಣಿ ನಡೆಸಿದ್ದಾರೆ.

ನಗರದ ಮಿಲಾಗ್ರಿಸ್ ಕಾಲೇಜು ಬಳಿ ಜಮಾಯಿಸಿದ ಸುಮಾರು 400 ವಲಸೆ ಕಾರ್ಮಿಕರಿಂದ ಧರಣಿ ನಡೆಸಿ, ತಮ್ಮ ಊರಿಗೆ ತೆರಳಲು ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಕಾರ್ಮಿಕರಿಗೆ ಊರಿಗೆ ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲಿಯವರೆಗೆ ಸಂಯಮದಿಂದ ಇರುವಂತೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News