ಉ.ಪ್ರದೇಶ: ಹಾಡಹಗಲೇ ಜನರ ಮುಂದೆ ಸಮಾಜವಾದಿ ಪಕ್ಷದ ನಾಯಕ, ಪುತ್ರನ ಗುಂಡಿಕ್ಕಿ ಹತ್ಯೆ

Update: 2020-05-19 09:03 GMT

ಲಕ್ನೋ: ಹಾಡಹಗಲೇ ಜನರ ಮುಂದೆಯೇ ಸಮಾಜವಾದಿ ಪಕ್ಷದ ಸ್ಥಳೀಯ ನಾಯಕ ಮತ್ತು ಪುತ್ರನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ನಡೆದಿದ್ದು, ಈ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ.

ಲಕ್ನೋದಿಂದ 379 ಕಿ.ಮೀ. ದೂರದ ಸಂಭಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮನ್ರೇಗಾದಡಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ನಡೆದ ವಾಗ್ವಾದದ ನಂತರ ಈ ಘಟನೆ ನಡೆದಿದೆ ಎನ್ನಲಾಗಿದೆ.

ರಸ್ತೆ ನಿರ್ಮಾಣ ವೀಕ್ಷಿಸಲು ಎಸ್ಪಿ ನಾಯಕ ಚೋಟೆ ಲಾಲ್ ದಿವಾಕರ್ ಮತ್ತು ಪುತ್ರ ಹೋಗಿದ್ದರು. ಈ ಸಂದರ್ಭ ಅಲ್ಲಿದ್ದ ಇಬ್ಬರು ಸ್ಥಳೀಯರು ರಸ್ತೆ ನಿರ್ಮಾಣ ವಿಚಾರವಾಗಿ ವಾಗ್ವಾದಕ್ಕಿಳಿದಿದ್ದಾರೆ. ಈ ಇಬ್ಬರು ರೈಫಲ್ ಗಳನ್ನು ಹಿಡಿದಿದ್ದರು. ಮಾತಿಕ ಚಕಮಕಿ ತೀವ್ರವಾಗುತ್ತಿದ್ದಂತೆ ಇಬ್ಬರು ತಂದೆ ಮಗನ ಮೇಲೆ ಇದ್ದಕ್ಕಿದ್ದಂತೆ ಗುಂಡು ಹಾರಿಸಿದ್ದಾರೆ. ಗುಂಡಿನ ಏಟಿಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News