ಬೆಂಗಳೂರು ಟೆಕ್ ಸಮಿಟ್ ಮುಂಡೂಡಿಕೆ: ಡಿಸಿಎಂ ಅಶ್ವಥ್ ನಾರಾಯಣ

Update: 2020-05-20 16:23 GMT

ಬೆಂಗಳೂರು, ಮೇ 20: ಪ್ರತಿಷ್ಠಿತ ಬೆಂಗಳೂರು ಟೆಕ್ ಸಮಿಟ್ (ಬಿಟಿಎಸ್) ನವೆಂಬರ್ 18ರಿಂದ 20ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಹಿಂದೆ ಸೆಪ್ಟೆಂಬರ್ 21 ರಿಂದ 23ರವರೆಗೆ ಬೆಂಗಳೂರು ಟೆಕ್ ಸಮಿಟ್ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಕೋವಿಡ್-19 ಕಾರಣಕ್ಕೆ ದೇಶ-ವಿದೇಶಗಳಿಂದ ಐಟಿ ಪ್ರತಿನಿಧಿಗಳು ಬರುವುದು ಕಷ್ಟ ಆಗುತ್ತದೆ ಎನ್ನವ ಕಾರಣಕ್ಕೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಈ ಬಾರಿಯ ಟೆಕ್ ಸಮಿಟ್ ವಿಶೇಷವಾಗಿರುತ್ತದೆ. ವೈಯಕ್ತಿಕ ಅಂತರ ಸೇರಿದಂತೆ ಹಲವು ವಿಷಯಗಳಲ್ಲಿ ಮುಂಜಾಗ್ರತೆ ವಹಿಸಲಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರು ಎದುರಿಸಿದ ಸಮಸ್ಯೆಗಳು ಮತ್ತು ಅದಕ್ಕೆ ತಂತ್ರಜ್ಞಾನ ಒದಗಿಸಿದ ಉಪಾಯಗಳ ಬಗ್ಗೆಯೂ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ. ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಯೂ ತಜ್ಞರು ಉಪನ್ಯಾಸ ನೀಡಲಿದ್ದಾರೆ ಎಂದು ಅವರು ಹೇಳಿದರು.

ಸಭೆಯಲ್ಲಿ ಐಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ್, ಐಟಿ ನಿರ್ದೇಶಕಿ ಮೀನಾ ನಾಗರಾಜ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News