ಶಾಲಾ ವಠಾರದಿಂದ ಮರ ಕಳವು: ಇಬ್ಬರ ವಿರುದ್ಧ ಪ್ರಕರಣ ದಾಖಲು

Update: 2020-05-20 16:40 GMT

ಪುತ್ತೂರು :  ಶಾಲಾ ಆವರಣದಲ್ಲಿದ್ದ ಮರಗಳನ್ನು ಕಡಿದ ಆರೋಪದಲ್ಲಿ ಇಬ್ಬರ ವಿರುದ್ಧ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಶೇಕಮಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಳದಿಂದ ಅಕ್ರಮವಾಗಿ ಮರಗಳನ್ನು ಕಡಿದ ಆರೋಪದಲ್ಲಿ ಸ್ಥಳೀಯರಾದ ಸೀತಾರಾಮ ಮತ್ತು ಅಶೋಕ ಎಂಬವರನ್ನು ಪಾಣಾಜೆ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಅವರಿಂದ ಅಕ್ರಮವಾಗಿ ಕಡಿದ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಲೆಯ ವಠಾರದಲ್ಲಿದ್ದ ದೂಪದ ಮರ, ಗಾಳಿ ಮರ ಮತ್ತು ಇತರ ಕಟ್ಟಿಗೆ ಮರವನ್ನು ಆರೋಪಿಗಳಿಬ್ಬರು ಕಡಿದು ಸಾಗಾಟ ನಡೆಸಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಅವರಿಂದ ರೂ. 3000 ಮೌಲ್ಯದ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಣಾಜೆ ವಲಯ ಅರಣ್ಯಾಧಿಕಾರಿ ಲೋಕೇಶ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News