ಬೆಂಗಳೂರು: ಕೌಟುಂಬಿಕ ಕಾರಣಕ್ಕಾಗಿ ಮನನೊಂದು ಟೆಕ್ಕಿ ಆತ್ಮಹತ್ಯೆ

Update: 2020-05-21 14:59 GMT

ಬೆಂಗಳೂರು, ಮೇ 21: ಕೌಟುಂಬಿಕ ಕಾರಣಕ್ಕಾಗಿ ಮನನೊಂದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತಮ್ ಹೆಗಡೆ(30) ಆತ್ಮಹತ್ಯೆ ಮಾಡಿಕೊಂಡಿರುವ ಟೆಕ್ಕಿ ಎಂದು ತಿಳಿದುಬಂದಿದೆ.

ಪುತ್ರನ ವಿವಾಹಕ್ಕೆ ಪೋಷಕರು ಮುಂದಾಗಿದ್ದಾರೆ. ಆದರೆ, ಮದುವೆ ಮಡಿಕೊಳ್ಳಲು ಇಷ್ಟವಿಲ್ಲದ ಕಾರಣದಿಂದಾಗಿ ಉತ್ತಮ್ ಹೆಗಡೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News