ಮಾಧುಸ್ವಾಮಿ ವಿರುದ್ಧ ಡಿಜಿಪಿಗೆ ದೂರು ನೀಡಿದ ಆರೆಸ್ಸೆಸ್ ಮಾಜಿ ಕಾರ್ಯಕರ್ತ

Update: 2020-05-21 16:40 GMT

ಬೆಂಗಳೂರು, ಮೇ 21: ತಾಯಿಯಂತ ಮಹಿಳೆಗೆ ಅಗೌರವ ತೋರಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆರೆಸ್ಸೆಸ್ ಮಾಜಿ ಕಾರ್ಯಕರ್ತ ಎನ್.ಹನುಮೇಗೌಡ ದೂರು ಸಲ್ಲಿಸಿದ್ದಾರೆ.

ಗುರುವಾರ ಇಲ್ಲಿನ ನೃಪತುಂಗ ರಸ್ತೆಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಪ್ರತಿ ಮಹಿಳೆಯನ್ನು ತಾಯಿಯಂತೆ ಕಾಣುವ ಮತ್ತು ನಾಡಿನ ಜನತೆಗೆ ಅನ್ನ ಕೊಡುವ ರೈತ ಮಹಿಳೆಯರ ಬಗ್ಗೆ ಬಹಿರಂಗವಾಗಿ ಅಗೌರವ ತೋರಿದ್ದು, ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಕೂಡಲೇ ಸಚಿವರ ವಿರುದ್ಧ ಮೊಕದ್ದಮೆ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹನುಮೇಗೌಡ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News