ಹೆಜಮಾಡಿ: ಜಾರ್ಖಂಡ್ ಮೂಲದ ವ್ಯಕ್ತಿ ಸ್ಕೂಟರ್ ಅಪಘಾತದಲ್ಲಿ ಮೃತ್ಯು

Update: 2020-05-22 05:44 GMT

ಪಡುಬಿದ್ರಿ: ಸ್ಕೂಟರ್ ಅಪಘಾತದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕ ಸಾವನ್ನಪ್ಪಿದ ಘಟನೆ ಹೆಜಮಾಡಿ ಗ್ರಾಮದ ಗುಂಡಿ ಬಳಿ ಸಂಭವಿಸಿದೆ.

ಜಾರ್ಖಂಡ್ ಮೂಲದ ಸದಕತ್ತ್ ಅನ್ಸಾರಿ (30) ಮೃತರು ಎಂದು ಗುರುತಿಸಲಾಗಿದೆ.

ಗಾರೆ ಕೆಲಸ ಮಾಡಿಕೊಂಡು ಹೆಜಮಾಡಿಯ ಎಸ್ ಎಸ್ ರೋಡ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಪತ್ನಿ ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಗುರುವಾರ ರಾತ್ರಿ ಸ್ಕೂಟರ್ ನಲ್ಲಿ ತೆರಳಿದ್ದರು. ಮನೆಯಿಂದ ಹೋದವರು ಗುಂಡಿ ಸಮೀಪದ ಮೋರಿಗೆ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಸಹೋದರ ಪಡುಬಿದ್ರಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News